ಹೆದರದಿರು ಮನವೆ, ಬೆದರದಿರು ತನುವೆ,
ನಿಜವನರಿತು ನಿಶ್ಚಿಂತನಾಗಿರು.
ಫಲವಾದ ಮರನ ಕಲ್ಲಲಿ ಇಡುವುದೊಂದು ಕೋಟಿ,
ಎಲವದಮರನ ಇಡುವರೊಬ್ಬರ ಕಾಣೆ.
ಭಕ್ತಿಯುಳ್ಳವರ ಬೈವರೊಂದುಕೋಟಿ,
ಭಕ್ತಿಯಿಲ್ಲದವರ ಬೈವರೊಬ್ಬರ ಕಾಣೆ.
ನಿಮ್ಮ ಶರಣರ ನುಡಿಯೆ ಎನಗೆ ಗತಿ, ಸೋಪಾನ,
ಚೆನ್ನಮಲ್ಲಿಕಾರ್ಜುನಾ.
- ಅಕ್ಕಮಹಾದೇವಿ
Whatever maybe their religion, whatever maybe their status, whatever maybe their colour, without discrimination, consider everyone to be yo...
No comments:
Post a Comment